ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.