ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
Cross references
ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.