ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
Cross references
ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.
ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.
ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.