ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.