ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?