ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
Cross references
ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ.
ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ.
ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.