ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
Cross references
ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.
ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.