ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
Cross references
ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.