ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
Cross references
ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.