ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
Cross references
ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.