ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
Cross references
ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.