ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
Cross references
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.