Home Bibles ಯೋಬ 21:22 · ಕನ್ನಡ ಬೈಬಲ್
ಯೋಬ 21:22 · ಕನ್ನಡ ಬೈಬಲ್

ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!

Cross references

ಯೋಬ 4:18

ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.

ಯೋಬ 15:15

ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.

ಯೋಬ 34:17

ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?

ಯೋಬ 35:11

ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.

ಯೋಬ 36:22

ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?

ಯೋಬ 36:23

ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?

ಯೋಬ 38:3

ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.

ಯೋಬ 40:2

ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

ಕೀರ್ತನೆಗಳು 82:1

ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.

ಕೀರ್ತನೆಗಳು 113:5

ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.

ಸಭಾಪ್ರಸಂಗಿ 5:8

ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.

ಯೆಶಾಯ 40:13

ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?

ಯೆಶಾಯ 40:22

ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

ಯೆಶಾಯ 45:9

ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?

ರೋಮಾಪುರದವರಿಗೆ 11:34

ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?

1 ಕೊರಿಂಥದವರಿಗೆ 2:16

ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

1 ಕೊರಿಂಥದವರಿಗೆ 6:3

ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

2 ಪೇತ್ರ 2:4

ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

ಯೂದ 1:6

ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

ಪ್ರಕಟನೆ 20:1

ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.

ಪ್ರಕಟನೆ 20:12

ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ

Interlinear

Choose Theme