ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
Cross references
ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ