ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
Cross references
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.