ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
Cross references
ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.