ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
Cross references
ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.