ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
Cross references
ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.