ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
Cross references
ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.
ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.
ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.
ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.
ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?