ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
Cross references
ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.
ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.