Home Bibles ಯೋಬ 34:20 · ಕನ್ನಡ ಬೈಬಲ್
ಯೋಬ 34:20 · ಕನ್ನಡ ಬೈಬಲ್

ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.

Cross references

ನಿರ್ಗಮಕಾಂಡ 12:29

ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

1 ಸಮುವೇಲ 25:37

ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.

1 ಸಮುವೇಲ 26:10

ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.

ಯೋಬ 12:19

ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.

ಯೋಬ 36:20

ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.

ಕೀರ್ತನೆಗಳು 73:19

ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.

ಯೆಶಾಯ 10:16

ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

ಯೆಶಾಯ 30:13

ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.

ಯೆಶಾಯ 30:30

ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.

ಯೆಶಾಯ 37:36

ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

ಯೆಶಾಯ 37:38

ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್‌, ಸರೆಚೆರ್‌ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.

ಯೆಶಾಯ 40:23

ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2

ದಾನಿಯೇಲ 2:34

ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 5:30

ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.

ದಾನಿಯೇಲ 8:25

ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

ಜೆಕರ್ಯ 4:6

ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 25:6

ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.

ಲೂಕ 12:20

ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.

ಲೂಕ 17:26

ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

1 ತೆಸಲೋನಿಕದವರಿಗೆ 5:2

ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

2 ಪೇತ್ರ 2:3

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

Interlinear

Choose Theme