ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
Cross references
ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.