ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
Cross references
ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.