Cross references
ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.