ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
Cross references
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.