ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
Cross references
ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.