Home Bibles ಯೋಬ 42:9 · ಕನ್ನಡ ಬೈಬಲ್
ಯೋಬ 42:9 · ಕನ್ನಡ ಬೈಬಲ್

ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.

Cross references

ಆದಿಕಾಂಡ 20:17

ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.

ಯೋಬ 2:11

ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

ಯೋಬ 22:27

ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.

ಯೋಬ 22:30

ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.

ಯೋಬ 34:31

ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.

ಯೋಬ 42:8

ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.

ಸಾಮೇತಿಗಳು 3:11

ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;

ಸಭಾಪ್ರಸಂಗಿ 9:7

ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

ಯೆಶಾಯ 60:14

ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.

ಮತ್ತಾಯ 7:24

ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

ಯೋಹಾನ 2:5

ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.

ಅಪೋಸ್ತಲರ ಕೃತ್ಯಗಳು 9:6

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 10:33

ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ಹೆಬ್ರಿಯರಿಗೆ 11:8

ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

Interlinear

Choose Theme