ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
Cross references
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.