Home Bibles ಯೋಬ 5:19 · ಕನ್ನಡ ಬೈಬಲ್
ಯೋಬ 5:19 · ಕನ್ನಡ ಬೈಬಲ್

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

Cross references

ಕೀರ್ತನೆಗಳು 34:19

ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

ಕೀರ್ತನೆಗಳು 34:20

ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.

ಕೀರ್ತನೆಗಳು 66:12

ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;

ಕೀರ್ತನೆಗಳು 91:3

ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.

ಕೀರ್ತನೆಗಳು 91:15

ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.

ಸಾಮೇತಿಗಳು 6:16

ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:

ಸಾಮೇತಿಗಳು 24:16

ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

ಯೆಶಾಯ 43:2

ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

ದಾನಿಯೇಲ 3:25

ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

ದಾನಿಯೇಲ 6:17

ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.

1 ಕೊರಿಂಥದವರಿಗೆ 10:13

ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ

2 ಕೊರಿಂಥದವರಿಗೆ 1:8

ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

2 ಪೇತ್ರ 2:9

ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

Interlinear

Choose Theme