ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
Cross references
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.