ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
Cross references
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.