ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
Cross references
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;