ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
Cross references
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.