ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
Cross references
ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.
ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.