ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
Cross references
ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.