ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
Cross references
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.