ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
Cross references
ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.