ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
Cross references
ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.