ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
Cross references
ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.