ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
Cross references
ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ