ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
Cross references
ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.