ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
Cross references
ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.