ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
Cross references
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;
ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.