ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
Cross references
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.