ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
Cross references
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.