ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
Cross references
ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.