ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
Cross references
ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.