ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
Cross references
ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು.
ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.