ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
Cross references
ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.