ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
Cross references
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ